Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ - ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:4
14 ತಿಳಿವುಗಳ ಹೋಲಿಕೆ  

ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ದ್ವಾರಪಾಲಕರಲ್ಲಿ; ಅಕ್ಕೂಬ್, ಟಲ್ಮೋನರೂ ಮತ್ತು ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ ಒಟ್ಟು ನೂರ ಎಪ್ಪತ್ತೆರಡು ಮಂದಿ.


ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.


ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.


ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.


ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀಯನು ಅಜರ್ಯನನ್ನು ಪಡೆದನು.


ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.


ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು