Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5-6 ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಲಯದ ಕೆಲಸಮಾಡಿಸುವ ಮೊಕ್ತೇಸರರಿಗೆ ಅದನ್ನು ಒಪ್ಪಿಸು ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ಥರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಈ ಹಣವನ್ನು ವಿನಿಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:5
8 ತಿಳಿವುಗಳ ಹೋಲಿಕೆ  

ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.


ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ಅವನ ಮಕ್ಕಳು ಅವನಿಗೆ ವಿರುದ್ಧವಾಗಿ ಹೇಳಲಾದ ಅನೇಕ ದೈವೋಕ್ತಿಗಳೂ, ಹಾಗು ದೇವಾಲಯದ ಜೀರ್ಣೋದ್ಧಾರ ವೃತ್ತಾಂತವು, ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ದಾಖಲಿಸಲಾಗಿದೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.


ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,


ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು