Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೂದರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಲಿನ ಹೊರಗೆ ಪರ್ವರೀಮೆಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠೆಪಡಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಯೋಷೀಯನು ಸುಟ್ಟುಹಾಕಿದನು. ಅವು ಯೆಹೋವ ದೇವರ ಆಲಯದ ದ್ವಾರದಲ್ಲಿ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದವು. ಅರಸರು ಸೂರ್ಯನಿಗೆ ಸಮರ್ಪಿಸಿ ನಿಲ್ಲಿಸಿದ್ದ ರಥಗಳನ್ನು ಸಹ ಸುಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:11
8 ತಿಳಿವುಗಳ ಹೋಲಿಕೆ  

ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.


ಸೂರ್ಯನು ಪ್ರಕಾಶಿಸುವುದನ್ನಾಗಲಿ, ಚಂದ್ರನು ಕಳೆತುಂಬಿದವನಾಗಿ ಚಲಿಸುವುದನ್ನಾಗಲಿ ನಾನು ನೋಡಿದಾಗ,


ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು