Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ನಗರದಲ್ಲಿ ಉಳಿದಿದ್ದ ಜನರನ್ನೆಲ್ಲಾ ನೆಬೂಜರದಾನನು ಸೆರೆಹಿಡಿದನು. ರಾಜನಾದ ನೆಬೂಕದ್ನೆಚ್ಚರನಿಗೆ ವಿಧೇಯರಾಗಿರಲು ಕೆಲವು ಜನರು ಒಪ್ಪಿದರು. ಆದರೆ ನೆಬೂಜರದಾನನು ಆ ಜನರನ್ನೆಲ್ಲಾ ಸೆರೆಹಿಡಿದನು. ಅವನು ನಗರದಲ್ಲಿದ್ದ ಪ್ರತಿಯೊಬ್ಬರನ್ನೂ ಕರೆದೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:11
15 ತಿಳಿವುಗಳ ಹೋಲಿಕೆ  

ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲನ್ನು ಮೂರು ಭಾಗ ಮಾಡಿ, ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು.


ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.


ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಕೇವಲ ದಿಕ್ಕಿಲ್ಲದವರಲ್ಲಿ ಅನೇಕರನ್ನೂ, ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ಬಾಬೆಲಿನ ಅರಸನ ಮೊರೆಹೊಕ್ಕವರನ್ನೂ ಮತ್ತು ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು