Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಸ್ದೀಯರ ಸೈನ್ಯದವರು ಅವನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬಾಬಿಲೋನ್ ಸೇನೆಯು ರಾಜನಾದ ಚಿದ್ಕೀಯನನ್ನು ಅಟ್ಟಿಸಿಕೊಂಡು ಹೋಗಿ, ಅವನನ್ನು ಜೆರಿಕೊವಿನ ಸಮೀಪದಲ್ಲಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:5
14 ತಿಳಿವುಗಳ ಹೋಲಿಕೆ  

ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.


ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.


ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.


ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.


ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.


ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.


ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”


“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು