Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಎಲೀಷನು ಗೇಹಜಿಗೆ “ನೀನು ಆಕೆಗೆ ಹೇಳು, ‘ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರ ಮಾಡಿರುವೆ ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರ ಅರಸನ ಬಳಿ ಅಥವಾ ಸೇನಾಧಿಪತಿಯ ಬಳಿಯಾಗಲಿ ಮಾತನಾಡಬೇಕೋ’ ಎಂದು ಕೇಳಲು” ಆಕೆಯು, “ನಾನು ಸ್ವಕುಲದವರ ಮಧ್ಯದಲ್ಲಿ ವಾಸವಾಗಿದ್ದೇನೆ” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಎಲೀಷನು ಗೇಹಜಿಯ ಮುಖಾಂತರವಾಗಿ ಆಕೆಯನ್ನು - ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದಿ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನಗೋಸ್ಕರವಾಗಿ ಅರಸನ ಮುಂದಾಗಲಿ ಸೇನಾಪತಿಯ ಮುಂದಾಗಲಿ ಮಾತಾಡಬೇಕೋ ಎಂದು ಕೇಳಲು ಆಕೆಯು - ನಾನು ಸ್ವಕುಲದವರ ಮಧ್ಯದಲ್ಲಿ ಸುಖವಾಗಿದ್ದೇನೆ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಷನು ಗೇಹಜಿಗೆ (ಸೇವಕನಿಗೆ), “ನೀನು ಆ ಸ್ತ್ರೀಯ ಬಳಿಗೆ ಹೋಗಿ, ‘ನೋಡು, ನೀನು ನಮ್ಮನ್ನು ಉಪಚರಿಸುವುದಕ್ಕಾಗಿ ನಿನ್ನಿಂದ ಸಾಧ್ಯವಾದಷ್ಟು ಮಾಡಿರುವೆ. ನಮ್ಮಿಂದ ನಿನಗೇನಾದರೂ ಉಪಕಾರವಾಗಬೇಕೇ? ನಿನ್ನ ಬಗ್ಗೆ ರಾಜನ ಬಳಿಯಲ್ಲಾದರೂ ಅಥವಾ ಸೈನ್ಯಾಧಿಕಾರಿಯ ಬಳಿಯಲ್ಲಾದರೂ ನಾವು ಮಾತನಾಡಬೇಕೇ?’ ಎಂದು ಕೇಳು” ಎಂಬುದಾಗಿ ಹೇಳಿದನು. ಆ ಸ್ತ್ರೀಯು, “ಇಲ್ಲಿ ನಾನು ನನ್ನ ಜನರೊಡನೆ ಸುಖವಾಗಿ ಜೀವಿಸುತ್ತಿದ್ದೇನೆ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:13
22 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.


ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.


ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆ ಸೇರಿರುವುದನ್ನು ಕಂಡು ಅವನು ಅವರನ್ನು ಸಮೀಪಿಸಿ, “ನಾಯಕನೇ ನಿನಗೊಂದು ಮಾತು ಹೇಳುವುದಿದೆ” ಎಂದನು. ಯೇಹುವು ಅವನಿಗೆ, “ನಮ್ಮಲ್ಲಿ ಯಾರಿಗೆ?” ಎಂದು ಕೇಳಲು ಅವನು, “ಸೇನಾಧಿಪತಿಯಾದ ನಿನಗೆ” ಎಂದು ಉತ್ತರಕೊಟ್ಟನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು.


ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.


ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು