Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲೀಷನು ಆಕೆಗೆ - ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವಿ ಅಂದನು. ಅದಕ್ಕೆ ಆಕೆಯು - ದೇವರ ಮನುಷ್ಯನೇ, ಒಡೆಯನೇ, ಹೀಗೆ ಹೇಳಿ ನಿನ್ನ ದಾಸಿಯನ್ನು ವಂಚಿಸಬೇಡ ಎಂದು ನುಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:16
16 ತಿಳಿವುಗಳ ಹೋಲಿಕೆ  

ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.


“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.


ಯೆರಿಕೋವಿನ ಜನರು ಎಲೀಷನಿಗೆ, “ನಮ್ಮ ಒಡೆಯನಾದ ನಿನಗೆ ಗೊತ್ತಿರುವಂತೆ, ಈ ಊರು ಕಟ್ಟಲ್ಪಟ್ಟಿರುವ ಸ್ಥಳವು ಒಳ್ಳೆಯದಾಗಿದೆ. ಆದರೆ ನೀರು ಕೆಟ್ಟದ್ದಾಗಿರುವುದರಿಂದ ಬಂಜೆತನ ಉಂಟಾಗಿದೆ” ಎಂದು ಹೇಳಿದರು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?


ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.


ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.


ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು