Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲೀಷನು, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿದೆ, ಹೇಳು,” ಎಂದನು. ಅದಕ್ಕೆ ಆಕೆ, “ನಿಮ್ಮ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲೀಷನು ಆಕೆಗೆ - ನಾನು ನಿನಗೇನು ಮಾಡಬೇಕನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ, ಹೇಳು ಅಂದನು. ಅದಕ್ಕೆ ಆಕೆಯು - ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲೀಷನು, “ನಾನು ನಿನಗೆ ಹೇಗೆ ಸಹಾಯ ಮಾಡಲಿ? ನಿನ್ನ ಮನೆಯಲ್ಲಿ ಏನಿದೆ? ನನಗೆ ಅದನ್ನು ತಿಳಿಸು” ಎಂದು ಕೇಳಿದನು. ಆ ಸ್ತ್ರೀಯು, “ನನ್ನ ಮನೆಯಲ್ಲಿ ನನ್ನ ಹತ್ತಿರ ಏನೂ ಇಲ್ಲ. ನನ್ನ ಹತ್ತಿರ ಒಂದು ಪಾತ್ರೆ ಆಲೀವ್ ಎಣ್ಣೆ ಮಾತ್ರ ಇದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲೀಷನು ಅವಳಿಗೆ, “ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು? ನನಗೆ ತಿಳಿಸು,” ಎಂದನು. ಅವಳು, “ನಿನ್ನ ಸೇವಕಿಗೆ ಒಂದು ಪಾತ್ರೆಯಲ್ಲಿ ಸ್ವಲ್ಪವೇ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:2
10 ತಿಳಿವುಗಳ ಹೋಲಿಕೆ  

ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.


ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.


ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,


ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.


ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.


ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು