Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗೆ ಆಕೆಯು ಪ್ರಯಾಣಮಾಡಿ ಕರ್ಮೆಲ್‍ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:25
10 ತಿಳಿವುಗಳ ಹೋಲಿಕೆ  

ಎಲೀಷನು ಅಲ್ಲಿಂದ ಕರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರ್ಯಕ್ಕೆ ಹಿಂದಿರುಗಿದನು.


ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.


ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.


ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,


ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.


ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.


ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.


ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು