Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು, ದಯವಿಟ್ಟು ಓಡಿಹೋಗಿ ಆಕೆಯನ್ನು ಎದುರುಗೊಂಡು, “ನಿನಗೂ, ನಿನ್ನ ಗಂಡನಿಗೂ, ಮಗನಿಗೂ ಕ್ಷೇಮವೋ?” ಎಂದು ವಿಚಾರಿಸು ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ, “ಕ್ಷೇಮ” ಎಂದು ಉತ್ತರ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಅಗೋ, ಅಲ್ಲಿ ಶೂನೇಮ್ಯಳು; ನೀನು ಓಡಿಹೋಗಿ ಆಕೆಯನ್ನು ಭೇಟಿಯಾಗು; ‘ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ?’ ಎಂದು ವಿಚಾರಿಸು,” ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆ ಆ ಸೇವಕನಿಗೆ, “ಕ್ಷೇಮ,” ಎಂದು ಉತ್ತರಕೊಟ್ಟು, ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಗೋ, ಅಲ್ಲಿ ಶೂನೇಮ್ಯಳು! ನೀನು ಓಡಿಹೋಗಿ ಆಕೆಯನ್ನು ಎದುರುಗೊಂಡು - ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೋ ಎಂದು ವಿಚಾರಿಸು ಎಂಬದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆಯು ಆ ಸೇವಕನಿಗೆ - ಕ್ಷೇಮ ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವಳನ್ನು ಭೇಟಿ ಮಾಡುವುದಕ್ಕೆ ಓಡಿಹೋಗಿ ಅವಳಿಗೆ, ‘ನೀನು ಕ್ಷೇಮವಾಗಿರುವೆಯಾ? ನಿನ್ನ ಗಂಡ ಕ್ಷೇಮವಾಗಿರುವನೇ? ನಿನ್ನ ಮಗು ಕ್ಷೇಮವಾಗಿರುವುದೇ?’ ಎಂದು ಕೇಳು” ಎಂಬುದಾಗಿ ಹೇಳಿ ಕಳುಹಿಸಿದನು. ಅಂತೆಯೇ ಗೇಹಜಿಯು ಆಕೆಯನ್ನು ಕೇಳಿದನು. ಅವಳು “ಹೌದು, ಕ್ಷೇಮವಾಗಿದ್ದೇವೆ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:26
16 ತಿಳಿವುಗಳ ಹೋಲಿಕೆ  

ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನು ತಿಳಿಸಿದನು. ಏಲಿಯು ಅದನ್ನು ಕೇಳಿ, “ಆತನು ಯೆಹೋವನು; ತನಗೆ ಸರಿಕಾಣುವುದನ್ನು ಮಾಡಲಿ” ಎಂದನು.


ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.


ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.


ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”


ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.


ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.


ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು