Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಸ್ತ್ರೀಯು ತನ್ನ ಗಂಡನಿಗೆ - ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ ದೇವರ ಮನುಷ್ಯನೂ ಆಗಿರುತ್ತಾನೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:9
14 ತಿಳಿವುಗಳ ಹೋಲಿಕೆ  

ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು.


ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.


ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು


ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲ್ ಸೈನ್ಯದವರು ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಯೆಹೋವನು ಎಫ್ರಾಯೀಮ್ಯರಾದ ಇಸ್ರಾಯೇಲರನ್ನೆಲ್ಲಾ ಕೈಬಿಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು