Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅನಂತರ ಅವನು ತನ್ನ ಪರಿವಾರದವರೊಡನೆ ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ ಅವನ ಮುಂದೆ ನಿಂತು - ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವದೇ ಇಲ್ಲವೆಂಬದು ಈಗ ನನಗೆ ಗೊತ್ತಾಯಿತು; ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾಮಾನನು ತನ್ನ ಗುಂಪಿನೊಂದಿಗೆ ದೇವಮನುಷ್ಯನ ಹತ್ತಿರಕ್ಕೆ ಹಿಂದಿರುಗಿ ಬಂದನು. ಅವನು ಎಲೀಷನ ಮುಂದೆ ನಿಂತು, “ನೋಡಿ, ಇಸ್ರೇಲಿನಲ್ಲಿಯೇ ಹೊರತು ಭೂಮಂಡಲದ ಬೇರೆಲ್ಲಿಯೂ ದೇವರು ಇಲ್ಲವೇ ಇಲ್ಲ ಎಂಬುದು ಈಗ ತಾನೇ ನನಗೆ ತಿಳಿಯಿತು! ಈಗ ದಯಮಾಡಿ ನನ್ನ ಕಾಣಿಕೆಯನ್ನು ಸ್ವೀಕರಿಸಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:15
25 ತಿಳಿವುಗಳ ಹೋಲಿಕೆ  

ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.


ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.


ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.


ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.


ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, “ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.


ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.


ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.


ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.


ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು


ಆಗ ಅರಸನು ಅವನಿಗೆ, “ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ” ಎಂದನು.


ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು