Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ, ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಸಿರಿಯಾದ ಗುಂಪುಗಳು ಇಸ್ರಯೇಲರ ಪ್ರಾಂತದೊಳಗೆ ಮತ್ತೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲ್ಯರ ಪ್ರಾಂತದೊಳಗೆ ತಿರಿಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:23
10 ತಿಳಿವುಗಳ ಹೋಲಿಕೆ  

ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.


ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.


“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು