Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಜಾಯೇಲನು ಅವನನ್ನು, “ನನ್ನ ಒಡೆಯಾ, ಯಾಕೆ ಅಳುತ್ತಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಾಯೇಲರಿಗೆ ಎಷ್ಟು ಕೇಡು ಮಾಡುವಿ ಎಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ. ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ. ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ. ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹಜಾಯೇಲನು ಅವನನ್ನು - ನನ್ನ ಒಡೆಯಾ, ಯಾಕೆ ಅಳುತ್ತೀ ಎಂದು ಕೇಳಿದನು. ಅದಕ್ಕೆ ಅವನು - ನೀನು ಇಸ್ರಾಯೇಲ್ಯರಿಗೆ ಎಷ್ಟು ಕೇಡು ಮಾಡುವಿಯೆಂಬದು ನನಗೆ ಪ್ರಕಟವಾಯಿತು. ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸುವಿ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವಿ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವಿ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವಿ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:12
19 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.


ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆ ಹಾಕಿ, ಅದನ್ನು ಸ್ವಾಧೀನಪಡಿಸಿಕೊಂಡನು. ಅಲ್ಲಿಂದ ಅವನು ಯೆರೂಸಲೇಮಿಗೆ ವಿರೋಧವಾಗಿ ಹೊರಟನು.


ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಬಿಡುವರು. ಅವರ ಮನೆಗಳನ್ನು ಸೂರೆಮಾಡುವರು. ಅವರ ಹೆಂಡತಿಯರನ್ನು ಅತ್ಯಾಚಾರಕ್ಕೆ ಗುರಿಮಾಡುವರು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು. ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು. ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.


ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.


ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು