Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋರಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋರಾಮನು ಸತ್ತುಹೋದನು. ಅವನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿ ಮಾಡಿದರು. ಯೆಹೋರಾಮನ ಮಗನಾದ ಅಹಜ್ಯನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋರಾಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:24
18 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,


ಅರಾಮ್ಯರು ಯೋರಾಮನಿಗೆ ರಾಮದಲ್ಲಿ ಮಾಡಿದ ಗಾಯಗಳಿಗೆ ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕಾಗಿ ಅವನು ಇಜ್ರೇಲಿಗೆ ಬಂದನು. ಯೋರಾಮನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗನಾಗಿರುವ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ.


ಯೆಹೋಷಾಫಾಟನು ಪೂರ್ವಿಕರ ಬಳಿಗೆ ಸೇರಿದನು. ದಾವೀದನಗರದಲ್ಲಿ ಅವನನ್ನು ಪೂರ್ವಿಕರ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದ ಮೇಲೆ, ಅವನ ಮಗನಾದ ಯೆಹೋರಾಮನು ಅರಸನಾದನು.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ.


ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.


ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.


ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.


ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ಯೆಹೋರಾಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ, ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.


ಆದರೂ ಯೆಹೋವನು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ” ಎಂದು ಒಡಂಬಡಿಕೆ ಮಾಡಿ ಹೇಳಿದ್ದರಿಂದ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.


ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು