Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯೊಂದಿಗೆ ಮಾತನಾಡುತ್ತಾ, “ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಸಮಯದಲ್ಲಿ ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಗೆ - ಎಲೀಷನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ನನಗೆ ವಿವರಿಸು ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಮಯದಲ್ಲಿ ರಾಜನು ದೇವಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡುತ್ತಿದ್ದನು. ರಾಜನು ಗೇಹಜಿಗೆ, “ಎಲೀಷನು ಮಾಡಿರುವ ಮಹತ್ಕಾರ್ಯಗಳೆಲ್ಲವುಗಳನ್ನು ನನಗೆ ದಯವಿಟ್ಟು ತಿಳಿಸು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:4
24 ತಿಳಿವುಗಳ ಹೋಲಿಕೆ  

ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.


ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.


ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.


ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.


“ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.


ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?


ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.


ದೇವರ ಮನುಷ್ಯನು ಅವನಿಗೆ, “ಅದು ಎಲ್ಲಿ ಬಿದ್ದಿತು?” ಎಂದು ಕೇಳಲು, ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೇವರ ಮನುಷ್ಯನು ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಮುರಿದು ಅಲ್ಲಿ ಹಾಕಿದನು, ಕೂಡಲೆ ಕೊಡಲಿಯು ಮೇಲಕ್ಕೆ ಬಂದು ತೇಲಾಡಿತು.


ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಅನಂತರ, “ಆ ಶೂನೇಮ್ಯಳನ್ನು ಕರೆಯಿರಿ” ಎಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು, ಆಕೆಯು ಬಂದು ಅವನ ಮುಂದೆ ನಿಂತಳು.


ಅವನು ಅವರ ಕಡೆಗೆ ತಿರುಗಿಕೊಂಡು ಯೆಹೋವನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣು ಕರಡಿಗಳು ಬಂದು ಆ ಹುಡುಗರಲ್ಲಿ ನಲ್ವತ್ತೆರಡು ಮಂದಿಯನ್ನು ಹರಿದುಬಿಟ್ಟವು.


“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.


ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.


ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು