Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ; ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಹಾಕಿಬಿಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:26
12 ತಿಳಿವುಗಳ ಹೋಲಿಕೆ  

“ಆದರೆ ನೀವು, ‘ತಂದೆಯ ದೋಷಫಲವನ್ನು ಮಗನು ಅನುಭವಿಸುವುದು ಖಂಡಿತ’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ, ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಖಂಡಿತವಾಗಿ ಜೀವಿಸುವನು.


ಆದರೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪು ಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.


ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.


ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.


ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಯೋರಾಮನು ರಥವನ್ನು ಸಿದ್ಧಮಾಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಸಿದ್ಧಮಾಡಿದರು. ಆಗ ಇಸ್ರಾಯೇಲರ ಅರಸನಾದ ಯೋರಾಮನು ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು ಯೇಹುವನ್ನು ಎದುರುಗೊಳ್ಳುವುಕ್ಕಾಗಿ ಹೊರಟು ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.


ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು:


ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ.


ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು