Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರಣವಾಗುತ್ತದೆಂಬ ನಿಶ್ಚಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಮಟ್ಲ್ಯಾರ್ ಅಮ್ಕಾ ಮರನಾಚಿ ಶಿಕ್ಷಾ ಲಿವಲ್ಲಿ ಹಾಯ್ ಸರ್ಕೆ ಅಮ್ಕಾ ದಿಸ್ಲೆ, ಅಮಿ ಅಮ್ಚ್ಯಾ ವರ್ತಿ ನ್ಹಯ್, ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಥವ್ಕ್ ಅಮಿ ಶಿಕ್ತಲ್ಯಾಸಾಟಿ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 1:9
20 ತಿಳಿವುಗಳ ಹೋಲಿಕೆ  

ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.


ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.


ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.


ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.


ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.


ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.


“ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು.” ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ.


ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.


ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು