Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಡೊಳ್ಯಾಕ್ನಿ ದಿಸ್ತಾ ತೆ ಎವ್ಡೆಚ್ ತುಮಿ ಪಸಂದ್ ಕರ್ತ್ಯಾಶಿ ಕೊನ್ ತರ್ ಎಕ್ಲೊ ಅಪ್ನಿ ಕ್ರಿಸ್ತಾಚೊ ಮನುನ್ ಅಪ್ನಾಚಿಚ್ ಬಡಾಯ್ ಬೊಲ್ತಾ ಹೊಲ್ಯಾರ್, ತೊ ಅನಿಪರ್ತುನ್ ಚಿಂತುನ್ ಬಗುಂದಿತ್; ತೊ ಕ್ರಿಸ್ತಾಚೊ ಹೊಲ್ಯಾರ್ ಅಮಿಬಿ ಕ್ರಿಸ್ತಾಚೆಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 10:7
21 ತಿಳಿವುಗಳ ಹೋಲಿಕೆ  

ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.


ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.


ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?


ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.


ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ.


ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.


ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ.


ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.


ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು