Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅನೇಕ ಪ್ರಯಾಣಗಳನ್ನು ಮಾಡಿದೆನು. ನದಿಗಳಿಂದಲೂ ಕಳ್ಳರಿಂದಲೂ ನನ್ನ ಸ್ವಂತ ಜನರಾದ ಯೆಹೂದ್ಯರಿಂದಲೂ ಮತ್ತು ಯೆಹೂದ್ಯರಲ್ಲದವರಿಂದಲೂ ಅಪಾಯಕ್ಕೀಡಾಗಿದ್ದೆನು. ಪಟ್ಟಣಗಳಲ್ಲಿಯೂ ಜನರು ವಾಸವಾಗಿಲ್ಲದ ಸ್ಥಳಗಳಲ್ಲಿಯೂ ಸಮುದ್ರಗಳಲ್ಲಿಯೂ ಸುಳ್ಳುಸಹೋದರರ ಮಧ್ಯದಲ್ಲಿಯೂ ಅಪಾಯಕ್ಕೀಡಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕವ್ಡ್ಯಾಕಿ ಮಾಜ್ಯಾ ಪ್ರವಾಸಾತ್ನಿ ಮಾಜ್ಯಾ ವರ್‍ತಿ ಯೆಲ್ಲೆ ಅಪಾಯ್ ಕವ್ಡೆ ಮನುನ್ ಮಿಯಾ ಸಾಂಗುಚೆ! ಪಾನಿ ಭರುನ್ ಯೆಲ್ಲೆ ಅಪಾಯ್, ಚೊರಾಂಚೆ ಅಪಾಯ್, ಮಾಜ್ಯಾಚ್ ದೆಸಾಚ್ಯಾ ಲೊಕಾನಿಕ್ನಾ ಅಪಾಯ್, ಡಂಗ್ಳಿಯಾತ್ನಿ ಅಪಾಯ್, ಸಮುಂದರಾತ್ ಅಪಾಯ್, ಘಾತ್ಕಿ ಭಾವಾ ಅನಿ ಭೆನಿಯಾಂಚೊ ಅಪಾಯ್, ಶಾರಾತ್ನಿ ಅಪಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:26
35 ತಿಳಿವುಗಳ ಹೋಲಿಕೆ  

ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,


ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.


ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು


ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.


ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ


ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.


ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.


ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.


ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.


ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬುದಾಗಿ ಯೋಚಿಸಿದರು.


ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?


ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು