Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಸಾಪಾನ್ ಎವೆಕ್ ಅಪ್ನಾಚ್ಯಾ ಎಕ್ ಪಾಪಾತ್ ಪಡಿ ಸರ್ಕೆ ಕರ್‍ಲ್ಯಾನ್, ತಸೆಚ್ ತುಮ್ಚಿ ಮನಾಬಿ ಅಡ್ವ್ಯಾ ಯವ್ಜನ್ಯಾ ಭರುನ್ ಹಾಳ್ ಹೊತಿಲ್ ಅನಿ ಕ್ರಿಸ್ತಾತ್ಲ್ಯಾ ಸಾದ್ಯಾ ಅನಿ ಒಪ್ಸುನ್ ದಿಲ್ಲ್ಯಾ ಜಿವನಾಕ್ನಾ ತುಮಿ ಧುರ್ ಜಾಸಿಲಾ ಮನುನ್ ಮಾಕಾ ಭಿಂಯೆ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:3
47 ತಿಳಿವುಗಳ ಹೋಲಿಕೆ  

ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.


ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.


ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.


ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.


ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.


ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?


ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.


ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.


ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.


ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.


ಆ ಮನುಷ್ಯನು ತನ್ನ ಹೆಂಡತಿಗೆ ಹವ್ವ ಎಂದು ಹೆಸರಿಟ್ಟನು. ಆದುದರಿಂದ ಬದುಕಿರುವವರೆಲ್ಲರಿಗೂ ಆಕೆಯೇ ಮೂಲತಾಯಿಯಾಗಿದ್ದಾಳೆ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು