Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಏನು, ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತಾರ್ಥವಾಗಿ ಸಾರಿದ್ದು ಪಾಪಕೃತ್ಯವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನಿಮಗೆ ದೇವರ ಸುವಾರ್ತೆಯನ್ನು ಉಚಿತವಾಗಿ ಬೋಧಿಸಿದೆನು. ನಿಮ್ಮನ್ನು ಪ್ರಮುಖರನ್ನಾಗಿ ಮಾಡಲು ನನ್ನನ್ನು ತಗ್ಗಿಸಿಕೊಂಡೆನು. ಅದು ತಪ್ಪೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರತಿಫಲವನ್ನು ಎದುರುನೋಡದೇ, ದೇವರ ಸುವಾರ್ತೆಯನ್ನು ನೀವು ಉನ್ನತರಾಗಬೇಕೆಂದು, ನನ್ನನ್ನು ನಾನೇ ತಗ್ಗಿಸಿಕೊಂಡು ಉಚಿತವಾಗಿ ಸಾರಿದ್ದು ನನ್ನ ಪಾಪವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾನ್ ಬರಿ ಖಬರ್ ಫುಕೊಟ್ ತುಮ್ಕಾ ಪರ್‍ಚಾರ್ ಕರುನ್ ತುಮ್ಕಾ ವೈರ್ ಕಾಡುಸಾಟ್ನಿ ಮಿಯಾ ಮಾಕಾಚ್ ಬಾರಿಕ್ ಕರುನ್ ಘೆಟ್ಲೊ. ಹ್ಯಾತುರ್ ಮಿಯಾ ಕಾಯ್ ತರ್ ಪಾಪ್ ಕರ್‍ಲೊ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:7
14 ತಿಳಿವುಗಳ ಹೋಲಿಕೆ  

ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ.


ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಅಥವಾ, ದುಡಿಯದೆ ಜೀವಿಸುವುದಕ್ಕೆ ನನಗೂ ಬಾರ್ನಬನಿಗೂ ಹಕ್ಕಿಲ್ಲವೇ?


ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.


ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.


ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.


ನಿಮಗೆ ಆಚೆಯಿರುವ ಸೀಮೆಗಳಲ್ಲಿಯೂ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆಯನ್ನಿಟ್ಟುಕೊಂಡಿದ್ದೆವಷ್ಟೇ. ಮತ್ತೊಬ್ಬರ ಜಾಗದಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು