Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ಮತ್ತು ನಿಮಗೆ ಭಾರವಾಗಿರುವದಿಲ್ಲ; ನಾನು ನಿಮ್ಮ ಸೊತ್ತನ್ನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ದ್ರವ್ಯವನ್ನು ಕೂಡಿಸಿಡುವದು ಧರ್ಮವಲ್ಲ, ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವದೇ ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮ್ಕಾ ಬೆಟ್ ದಿವ್ಚಿ ಮನುನ್ ಮಿಯಾ ಅತ್ತಾ ತಿನ್ವೆ ಪಟಿ ತಯಾರ್ ಹೊಲಾ. ಖರೆ ಯೆಲ್ಯಾರ್ ಮಿಯಾ ತುಮ್ಕಾ ಎಕ್ ವಜ್ಜೆ ಹೊವ್ಕ್ ಮಾಕಾ ಮನ್ ನಾ. ಕಶ್ಯಾಕ್ ಮಟ್ಲ್ಯಾರ್ ತುಮ್ಚೆ ಮನುನ್ ಹೊತ್ತೆ ಮಾಕಾ ಕಾಯ್ಬಿ ನಕ್ಕೊ, ಮಾಕಾ ತುಮಿ ಪಾಜೆ. ಪೊರಾನಿ ಬಾಯ್ ಬಾಬಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ ನ್ಹಯ್, ಬಾಯ್ ಬಾಬಾನಿ ಪೊರಾಂಚ್ಯಾಸಾಟ್ನಿ ಗೊಳಾ ಕರುನ್ ಥವ್ತಲೆ ಸಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:14
28 ತಿಳಿವುಗಳ ಹೋಲಿಕೆ  

ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


ನಾನು ಇಂಥ ಭರವಸವುಳ್ಳವನಾಗಿದ್ದರಿಂದ ನೀವು ಎರಡನೆಯ ಸಾರಿ ಕೃಪಾರ್ಶೀವಾದವನ್ನು ಪಡೆದುಕೊಳ್ಳುವಂತೆ ನಿಮ್ಮ ಬಳಿಗೆ ಮೊದಲೇ ಬರಬೇಕೆಂದಿದ್ದೆನು.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.


ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.


ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.


ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.


ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ.


ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು