Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನಂತೂ ನನಗಿರುವದನ್ನು ನಿಮ್ಮ ಆತ್ಮಸಂರಕ್ಷಣೆಗೋಸ್ಕರ ಅತಿಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಿಯಾ ತುಮ್ಚ್ಯಾಸಾಟ್ನಿ ಮಾಜೆ ಮನುನ್ ಹೊತ್ತೆ ಸಗ್ಳೆ ಖರ್ಚ್ ಕರ್‍ತಾ ಅನಿ ಮಾಜೊ ಜಿವ್ ಸೈತ್ ತುಮ್ಚ್ಯಾಸಾಟ್ನಿ ಕರಗ್ತಾ. ಮಿಯಾ ತುಮ್ಚೊ ಎವ್ಡೊ ಪ್ರೆಮ್ ಕರ್ತನಾ ತುಮಿ ಮಾಜೊ ಕಮ್ಮಿ ಪ್ರೆಮ್ ಕರುಚೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:15
22 ತಿಳಿವುಗಳ ಹೋಲಿಕೆ  

ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ.


ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.


ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.


ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.


ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.


ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು.


ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು.


ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.


ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು