Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಯಾವ ಕೇಡನ್ನೂ ಮಾಡಬಾರದೆಂದು ದೇವರಲ್ಲಿ ನಾವು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವು ಮಾತ್ರ ಯೋಗ್ಯರೆಂದು ತೋರಿಸಿಕೊಳ್ಳುವ ಉದ್ದೇಶ ನಮಗಿಲ್ಲ. ನಾವು ಅಯೋಗ್ಯರೆನಿಸಿಕೊಂಡಿದ್ದರೂ ನೀವು ಒಳಿತನ್ನೇ ಮಾಡಬೇಕೆಂಬುದು ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂಬದು ನಮ್ಮ ಉದ್ದೇಶವಲ್ಲ; ನಾವು ಅಯೋಗ್ಯರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವರಾಗಬೇಕೆಂಬದೇ ನಮ್ಮ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಯಾವ ತಪ್ಪನ್ನೂ ಮಾಡದಿರಲಿ ಎಂಬುದಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಮ್ಮನ್ನು ಅಯೋಗ್ಯರೆಂದು ಜನರು ಭಾವಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವುದೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮಿ ಕಾಯ್ಬಿ ವಾಯ್ಟ್ ಕರಿನಸ್ಲ್ಯಾರ್ ಫಿರೆ ಮನುನ್ ಮಿಯಾ ದೆವಾಕ್ಡೆ ಮಾಗ್ತಾ. ಹೆಚ್ಯಾ ವೈನಾ ಅಮಿ ದಾಕ್ವುನ್ ದಿಲ್ಲಿ ವಾಟ್ ಯೆವ್ಡಿಚ್ ಸಮಾ ಮನುನ್ ದಾಕ್ವುಚೆ ಮನ್ತಲೊ ಮಾಜೊ ಉದ್ದೆಸ್ ನ್ಹಯ್, ಅಮಿ ಅದಿಕಾರಾಕ್ ಯೊಗ್ಯ್ ಮನ್ತಲೊ ತಿರ್ಮಾನ್ ಹೊಲ್ಯಾರ್ ಬಿ ಮೊಟೆ ನ್ಹಯ್, ಖರೆ ಕನ್ನಾಬಿ ಬರೆ ಕರುಚೆ ಮನ್ತಲಿಚ್ ಅಮ್ಚಿ ಗುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 13:7
25 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.


“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”


ಯಾಕೆಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡುವುದು ನಮ್ಮ ಉದ್ದೇಶ.


ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,


ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.


ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ, ನನ್ನ ಪ್ರಾಂತ್ಯವನ್ನು ವಿಸ್ತರಿಸಿ, ನಿನ್ನ ಕೃಪಾಹಸ್ತದಲ್ಲಿ ನನ್ನನ್ನು ಇರಿಸಿ ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ಕೇಡಿನಿಂದ ರಕ್ಷಿಸಬಾರದೇ?” ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು.


ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು