Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅತ್ತಾ ತುಮಿ ತೆಕಾ ಮಾಪ್ ಕರುನ್ ಅನಿ ತೆಕಾ ಧೈರೊ ದಿವ್ಕ್ ಪಾಜೆ, ನಾ ಹೊಲ್ಯಾರ್ ಲೈ ಬೆಜಾರಾತ್ ಪಡುನ್ ತೊ ದುಕ್ಕಾತ್ ರ್‍ಹಾಯ್ಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:7
20 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.


ಈ ನನ್ನ ಜನರು ಸಹ ದ್ರಾಕ್ಷಾರಸದಿಂದ ಓಲಾಡುತ್ತಾರೆ, ಮದ್ಯದಿಂದ ತೂಗಾಡುತ್ತಾರೆ; ಯಾಜಕ ಪ್ರವಾದಿಗಳೂ ಮದ್ಯದಿಂದ ಓಲಾಡುತ್ತಾರೆ, ದ್ರಾಕ್ಷಾರಸವೇ ಅವರನ್ನು ನುಂಗಿಬಿಟ್ಟಿದೆ, ಮದ್ಯದಿಂದ ತೂಗಾಡುತ್ತಾರೆ.


ಹರ್ಷಹೃದಯವು ಒಳ್ಳೆಯ ಔಷಧ, ಕುಗ್ಗಿದ ಮನದಿಂದ ಅನಾರೋಗ್ಯ.


ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.


ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.


ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.


ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.


ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.


“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;


ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.


ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.


ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು