Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಪ್ರಭುವು ಪವಿತ್ರಾತ್ಮನೇ. ಎಲ್ಲಿ ಪ್ರಭುವಿನ ಆತ್ಮನು ಇರುತ್ತಾನೋ ಅಲ್ಲಿ ಸ್ವತಂತ್ರವಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹಿತ್ತೆ ಧನಿ ಮಟ್ಲ್ಯಾರ್ ಆತ್ಮೊ, ಖೈ ಧನಿಯಾಚೊ ಆತ್ಮೊ ರ್‍ಹಾತಾ, ಥೈ ಸ್ವತಂತ್ರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:17
13 ತಿಳಿವುಗಳ ಹೋಲಿಕೆ  

ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು