Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು, ನಮ್ಮ ಸೇವೆಯ ಫಲವಾಗಿ, ಕ್ರಿಸ್ತನು ನಮ್ಮ ಕೈಯಿಂದ ಬರೆಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷಪಡಿಸಿದ್ದೀರಿ. ಅದು ಮಸಿಯಿಂದ ಬರೆದದ್ದಲ್ಲ. ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು. ಕಲ್ಲಿನ ಹಲಿಗೆಯ ಮೇಲಲ್ಲಾ, ಮನುಷ್ಯನ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಸ್ಲೊಬಿ ಸಂಶೆವ್ ನಸ್ತಾನಾ ತುಮಿಚ್ ಕ್ರಿಸ್ತಾನ್ ಲಿವಲ್ಲಿ ಅನಿ ಅಮ್ಚ್ಯಾ ವೈನಾ ಧಾಡುನ್ ದಿಲ್ಲಿ ಚಿಟಿ; ಶಾಯಿನ್ ಲಿವಲ್ಲಿ ನ್ಹಯ್, ಝಿತ್ತ್ಯಾ ದೆವಾಚ್ಯಾ ಆತ್ಮ್ಯಾನ್ ಗುಂಡ್ಯಾ ವೈನಿ ತೆ ಲಿವಲ್ಲೆ ನಾ, ಖರೆ ಮಾನ್ಸಾಚೆ ಕಾಳಿಜಾರ್ ಲಿವಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 3:3
35 ತಿಳಿವುಗಳ ಹೋಲಿಕೆ  

“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.


“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.


ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿ ಧರಿಸಿಕೋ, ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆದುಕೋ.


ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ, ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


“ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,


“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.


ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು