Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, ಕರ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರೇ, ನಮ್ಮನ್ನೂ ಸಹ ಯೇಸುವಿನೊಂದಿಗೆ ಎಬ್ಬಿಸಿ, ನಿಮ್ಮ ಜೊತೆಯಲ್ಲಿಯೂ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಜೆಜುಕ್ ಝಿತ್ತೊ ಕರುನ್ ಉಟ್ವಲ್ಲೊ ತೊಚ್ ದೆವ್ ಅಮ್ಕಾಬಿ ಜೆಜುಚ್ಯಾ ವಾಂಗ್ಡಾ ಝಿತ್ತೊ ಕರ್‍ತಾ ಅನಿ ತುಮ್ಕಾ ಅಪ್ನಾಚ್ಯಾ ಇದ್ರಾಕ್ ಘೆವ್ನ್ ಜಾತಾ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:14
16 ತಿಳಿವುಗಳ ಹೋಲಿಕೆ  

ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ದೇವರು ಕರ್ತನನ್ನು ತನ್ನ ಶಕ್ತಿಯಿಂದ ಪುನರುತ್ಥಾನಗೊಳಿಸಿದ ಹಾಗೆಯೇ ನಮ್ಮನ್ನೂ ತನ್ನ ಶಕ್ತಿಯಿಂದ ಎಬ್ಬಿಸುವನು.


ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು