Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬರ್‍ಯಾ ಖಬ್ರೆಚೊ ಉಜ್ವೊಡ್ ತೆನಿ ಬಗುಚೆ ನ್ಹಯ್ ಮನುನ್ ಹ್ಯಾ ಜಗಾಚ್ಯಾ ಮೊಟ್ಯಾ ಮುಖಂಡಾನ್ ತೆಂಚಿ ವಿಶ್ವಾಸಾನ್ ನಸಲ್ಲಿ ಮನಾ ಕುಡ್ಡಿ ಕರುನ್ ಥವ್ಲ್ಯಾನಾಯ್, ತಸೆ ಹೊವ್ನ್ ದೆವಾಚೊಚ್ ರುಪ್ ಹೊವ್ನ್ ಅಸಲ್ಲ್ಯಾ ಕ್ರಿಸ್ತಾಚಿ ಮಹಿಮಾ ಬರ್‍ಯಾ ಖಬ್ರೆಚೊ ಪರ್‌ಜಳ್ ಪರ್‍ಚಾರ್ ಹೊಲ್ಲೆ ಬಗುಕ್ ತೆಂಚ್ಯಾನ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:4
42 ತಿಳಿವುಗಳ ಹೋಲಿಕೆ  

“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.


ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.


ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?


ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.


ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.


ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.


ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.


‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.


ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.


ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು