Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನಿಗೆ ಮೆಚ್ಚುವವರಾಗಿರಬೇಕೆಂಬದೇ ನಮ್ಮ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಸೆಮನುನ್ ಅಮಿ ಧನಿಯಾಚ್ಯಾ ವಾಂಗ್ಡಾ ರಾಂವ್ದಿತ್, ನಾಹೊಲ್ಯಾರ್ ತೆಚ್ಯಾಕ್ನಾ ಧುರ್ ರ್‍ಹಾಂವ್ದಿತ್, ತೆಚ್ಯಾ ಮನಾ ಸರ್ಕೆ ಚಲ್ತಲೆ ಎಕುಚ್ ಅಮ್ಚೊ ಉದ್ದೆಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 5:9
21 ತಿಳಿವುಗಳ ಹೋಲಿಕೆ  

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.


ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.


ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.


ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.


ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು