Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಯಾವ ದುಃಖವನ್ನು ಹೊಂದಿರಬೇಕೆಂದು ದೇವರು ಬಯಸಿದ್ದನೋ ಅದೇ ದುಃಖವನ್ನು ನೀವು ಹೊಂದಿದ್ದೀರಿ. ಆ ದುಃಖವು ನಿಮ್ಮನ್ನು ಬಹು ಆಸಕ್ತಿಯುಳ್ಳವರನ್ನಾಗಿ ಮಾಡಿತು; ನೀವು ತಪ್ಪಿತಸ್ಥರಾಗಿರಲಿಲ್ಲವೆಂದು ನಿರೂಪಿಸಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನಿಮ್ಮನ್ನು ಕೋಪಗೊಳಿಸಿತು ಮತ್ತು ಭಯಗೊಳಿಸಿತು; ನನ್ನನ್ನು ನೋಡಬೇಕೆಂಬ ಬಯಕೆಯನ್ನು ನಿಮ್ಮಲ್ಲಿ ಉಂಟುಮಾಡಿತು; ನನ್ನ ಬಗ್ಗೆ ಚಿಂತಿಸುವಂತೆ ಮಾಡಿತು; ತಪ್ಪಿತಸ್ಥರನ್ನು ದಂಡಿಸಬೇಕೆಂಬ ಬಯಕೆಯನ್ನು ಉಂಟು ಮಾಡಿತು. ಆ ಸಮಸ್ಯೆಯ ಯಾವ ವಿಷಯದಲ್ಲಿಯೂ ನೀವು ಅಪರಾಧಿಗಳಾಗಿರಲಿಲ್ಲವೆಂದು ನಿರೂಪಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಬಗಾ ತುಮಿ ದೆವಾಚ್ಯಾ ಇಚ್ಚಾ ಪರ್ಕಾರ್ ದುಖ್ ಸೊಸಲ್ಲ್ಯಾಕ್ ಕಾಯ್ ಸಗ್ಳೆ ಪ್ರತಿ ಫಳ್ ತುಮ್ಕಾ ಗಾವ್ಲಾ, ಕವ್ಡಿ ಉಮ್ಮೆದ್ ತುಮ್ಚ್ಯಾ ಮದ್ದಿ ಭರ್ಲಾ! ತುಮಿ ಚುಕೆತ್ ನಸಲ್ಲೆ ಮನುನ್ ದಾಕ್ವುಕ್ ಕವ್ಡೆ ಬಗುಲ್ಯಾಶಿ, ಕಸ್ಲೊ ಸಂತಾಪ್, ಕಸ್ಲೆ ಭಿಂಯೆ, ಅನಿ ಕಸ್ಲಿ ಉರ್ಬಾ, ನ್ಯಾಯ್‍ನಿತ್ ಹುರಿ ಸರ್ಕೆ ಕರುನ್ ತುಮಿ ಚುಕೆತ್ ನಾಶಿ ಮನುನ್ ತುಮಿ ದಾಕ್ವುನ್ ದಿಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:11
54 ತಿಳಿವುಗಳ ಹೋಲಿಕೆ  

ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.


ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.


ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.


ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.


ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.


ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ.


ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,


ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು.


ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.


ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.


ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.


ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.


ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.


ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ.


ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.


ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,


ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.


ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.


ಅವರನ್ನು ಶಪಿಸಿ, ಅವರಲ್ಲಿ, ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು,


ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು