Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದಕಾರಣ ನಮ್ಮ ಮನಸ್ಸಿಗೆ ಆದರಣೆ ಉಂಟಾಯಿತು. ಅಷ್ಟು ಮಾತ್ರವೇ ಅಲ್ಲ, ತೀತನ ಮನಸ್ಸಿಗೆ ನಿಮ್ಮೆಲ್ಲರಿಂದ ಉಪಶಮನವಾದ ಕಾರಣ ನಾವು ಅವನ ಸಂತೋಷವನ್ನು ನೋಡಿ ಮತ್ತೂ ಹೆಚ್ಚಾಗಿ ಸಂತೋಷಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದಕಾರಣ ಇವೆಲ್ಲವುಗಳಿಂದ ನಮಗೆ ಉತ್ತೇಜನವಾಯಿತು. ನಮಗೆ ಉತ್ತೇಜನವಾಗಿದ್ದು ಅಲ್ಲದೆ, ನಿಮ್ಮೆಲ್ಲರಿಂದ ತೀತನ ಆತ್ಮಕ್ಕೆ ಉಪಶಮನವಾದ ಕಾರಣ, ನಾವು ಅವನ ಸಂತೋಷಕ್ಕಾಗಿ ಇನ್ನಷ್ಟು ಆನಂದಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸಮಾದಾನ್ ಸಾಂಗ್ತಲ್ಯಾಚ್ಯಾ ಭಾಯ್ರ್, ತಿತಾಚಿ ಕುಶಿ ಬಗುನ್ ಅಮ್ಚಿ ಕುಶಿ ದೊನ್‍ಪಟ್ ಹೊಲಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಸಗ್ಳ್ಯಾನಿಬಿ ತಿತಾಚ್ಯಾ ಮನಾಕ್ ಸಮಾದಾನ್ ದಿಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:13
16 ತಿಳಿವುಗಳ ಹೋಲಿಕೆ  

ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವಂತೆ ಮಾಡು. ಕ್ರಿಸ್ತನಲ್ಲಿ ನನ್ನ ಹೃದಯವನ್ನು ಉಲ್ಲಾಸಗೊಳಿಸು.


ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,


ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ.


ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.


ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.


ಆದಕಾರಣ ನಾನು ಆ ಪತ್ರವನ್ನು ಬರೆದದ್ದು: ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮೆಲ್ಲರ ಸಂತೋಷವೆಂದು ನೀವು ಭಾವಿಸುತ್ತೀರೆಂದು ನಂಬಿದ್ದೇನೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.


ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು