Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮಲ್ಲಿ ನನಗೆ ಬಹಳ ಭರವಸ ಉಂಟು; ನಿಮ್ಮ ವಿಷಯದಲ್ಲಿ ನನ್ನ ಉತ್ಸಾಹ ಬಹಳ; ಪರಿಪೂರ್ಣ ಆದರಣೆ ನನಗಾಯಿತು; ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ತುಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಮೇಲೆ ನನಗೆ ಪರಿಪೂರ್ಣ ಭರವಸೆ ಇದೆ. ನಿಮ್ಮ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ನಾನು ಬಹಳವಾಗಿ ಪ್ರೋತ್ಸಾಹ ಹೊಂದಿ, ನಮಗೆ ಬಂದಿದ್ದ ಎಲ್ಲಾ ಸಂಕಟಗಳಲ್ಲಿ ನಾವು ನಿಮ್ಮಿಂದ ಮಿತಿಯಿಲ್ಲದಷ್ಟು ಆನಂದಪಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ವರ್‍ತಿ ಮಾಕಾ ಪುರಾ ವಿಶ್ವಾಸ್ ಹಾಯ್ ಅನಿ ತುಮ್ಚ್ಯಾ ವಿಶಯಾತ್ ಲೈ ಅಭಿಮಾನ್ ಹಾಯ್. ಮಿಯಾ ಸಮಾಧಾನಾನ್ ಭರುನ್ ವೊತುಲಾ ಅನಿ ಕಸ್ಟಾ ಸಂಕಟಾಚ್ಯಾ ಮದ್ದಿಬಿ ಸಂತೊಸಾನ್ ಹುಡಿ ಮಾರುನ್ಗೆತ್ ಹಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:4
27 ತಿಳಿವುಗಳ ಹೋಲಿಕೆ  

ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.


ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.


ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.


ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರ್ಥಮಾಡಿಕೊಂಡಿದ್ದೀರಿ ಕಡೆ ವರೆಗೂ ಒಪ್ಪಿಕೊಳ್ಳುವಿರಿ ಎಂಬುದಾಗಿಯೂ, ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ನೀವು ನಮ್ಮ ಅಭಿಮಾನಕ್ಕೆ ಕಾರಣವಾದಂತೆ ನಾವು ನಿಮ್ಮ ಅಭಿಮಾನಕ್ಕೆ ಕಾರಣರಾಗಿರುವೆವು ಎಂದು ನೀವು ಒಪ್ಪಿಕೊಳ್ಳುತ್ತೀರಿ.


ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ.


ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.


ಯಾಕೆಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿ ಬರಲಿಲ್ಲ. ಬದಲಾಗಿ ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವೆಂದು ಕಂಡುಬಂದವು.


ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.


ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.


ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.


ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು