Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಬರೆದ ಪತ್ರದಿಂದ ನಿಮ್ಮ ಮನಸ್ಸಿಗೆ ನೋವಾಗಿರಬಹುದು. ಆದರೂ ಚಿಂತೆಯಿಲ್ಲ. ಆ ಪತ್ರವು ನಿಮ್ಮನ್ನು ಸ್ವಲ್ಪಕಾಲ ದುಃಖಕ್ಕೀಡುಮಾಡಿತೆಂದು ನಾನು ಮೊದಮೊದಲು ನೊಂದುಕೊಂಡೆನಾದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಬರೆದ ಪತ್ರಿಕೆಯು ನಿಮ್ಮನ್ನು ದುಃಖಪಡಿಸಿದ್ದರೂ ನನಗೆ ಪಶ್ಚಾತ್ತಾಪವಿಲ್ಲ. ಅದು ನಿಮ್ಮನ್ನು ಒಂದು ಗಳಿಗೆ ಹೊತ್ತಾದರೂ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪಪಡುತ್ತಿದ್ದರೂ ಈಗ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನಿಮಗೆ ಬರೆದ ಪತ್ರವು ನಿಮಗೆ ದುಃಖವನ್ನು ಉಂಟುಮಾಡಿದ್ದರೂ, ಅದನ್ನು ಬರೆದದ್ದಕ್ಕೆ ನನಗೆ ದುಃಖವಿಲ್ಲ, ಆ ಪತ್ರವು ನಿಮಗೆ ದುಃಖವನ್ನು ಉಂಟು ಮಾಡಿತೆಂದು ನನಗೆಗೊತ್ತಿದೆ. ಆ ವಿಷಯದಲ್ಲಿ ನನಗೆ ವ್ಯಸನವಾಯಿತು. ಆದರೆ ಅದು ನಿಮ್ಮನ್ನು ಸ್ವಲ್ಪಕಾಲದವರೆಗೆ ಮಾತ್ರ ದುಃಖಿತರನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಬರೆದಿದ್ದ ಪತ್ರದಿಂದ ನಿಮಗೆ ದುಃಖವಾಗಿದ್ದಲ್ಲಿ, ನಾನು ಅದಕ್ಕೆ ಬೇಸರಪಡುವುದಿಲ್ಲ. ನನ್ನ ಪತ್ರದಿಂದ ನಿಮಗೆ ದುಃಖವಾಯಿತಲ್ಲಾ ಎಂದು ಸ್ವಲ್ಪಕಾಲ ನಾನು ನೊಂದುಕೊಂಡಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾಜ್ಯಾ ಚಿಟಿ ವೈನಾ ಮಿಯಾ ತುಮ್ಕಾ ದುಕ್ವುಲೊ, ಜಾಲ್ಯಾರ್ಬಿ ತ್ಯಾತುರ್ ಮಾಕಾ ಕಾಯ್ ಬೆಜಾರ್ ನಾ. ತ್ಯಾ ಚಿಟಿಕ್ ಲಾಗುನ್ ಎಕ್‍ ಉಲ್ಲ್ಯಾ ಎಳಾಕ್ ತರ್ ಬಿ ಮಿಯಾ ತುಮ್ಕಾ ಬೆಜಾರಾತ್ ಘಾಟ್ಲೊ ಮನುನ್ ಚಿಂತುನ್ ಮಾಕಾಬಿ ಬೆಜಾರ್ ಹೊಲೊ. ಜಾಲ್ಯಾರ್ಬಿ ಅತ್ತಾ ಮಿಯಾ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 7:8
15 ತಿಳಿವುಗಳ ಹೋಲಿಕೆ  

ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮ್ಮಲ್ಲಿ ಎಂಥ ಶ್ರದ್ದೆಯನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸಾಬೀತುಪಡಿಸುವುದಕ್ಕೆ ಎಂಥ ಪ್ರಯಾಸ, ಎಂಥ ರೋಷ; ಎಂಥ ಭಯ; ಎಂಥ ಹಂಬಲ; ಎಂಥ ಉತ್ಸಾಹ; ತಪ್ಪಿತಸ್ಥರನ್ನು ಶಿಕ್ಷಿಸಲು ಎಂಥ ಬಯಕೆ. ನೀವು ಆ ಕಾರ್ಯದಲ್ಲಿ ನಿರ್ದೋಷಿಗಳೆಂದು ಎಲ್ಲಾ ವಿಧದಲ್ಲಿಯೂ ತೋರಿಸಿದ್ದೀರಿ.


ಆದರೆ ದೀನಾವಸ್ಥೆಯಲ್ಲಿರುವವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸುವ ಮೂಲಕ ನಮ್ಮನ್ನು ಸಂತೈಸಿದನು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.


ಅವನ ಬರುವಿಕೆಯಿಂದ ಮಾತ್ರವಲ್ಲದೆ ನಿಮ್ಮಿಂದ ಅವನು ಬಹಳ ಸಮಾಧಾನವನ್ನು ಹೊಂದಿದೆನೆಂದೂ, ನಿಮ್ಮ ಹಂಬಲ, ನಿಮ್ಮ ದುಃಖ, ನನ್ನ ಮೇಲಿರುವ ನಿಮ್ಮ ಕಾಳಜಿ; ಇವುಗಳನ್ನು ನಮಗೆ ತಿಳಿಸಿದಾಗ ನಾನು ಇನ್ನೂ ಹೆಚ್ಚಾಗಿ ಸಂತೋಷಪಟ್ಟೆನು.


ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.


ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು