Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವಜನರಿಗೆ ಸಹಾಯಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗುವಂತೆ ಅಪ್ಪಣೆಯಾಗಬೇಕೆಂದು ನಮ್ಮನ್ನು ಬಹಳವಾಗಿ ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವಜನರಿಗೆ ಸಹಾಯಮಾಡಲು ಭಾಗಿಗಳಾಗುವ ಅವಕಾಶವನ್ನು ತಮಗೆ ಕೊಡಬೇಕೆಂದು ಅವರು ತಾವಾಗಿಯೇ ನಮ್ಮನ್ನು ಬಹಳವಾಗಿ ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜುದೆಯಾತ್ ಹೊತ್ತ್ಯಾ ದೆವಾಚ್ಯಾ ಲೊಕಾಂಚಿ ಸೆವಾ ಕರ್‍ತಲ್ಯಾ ಕಾಮಾತ್ ಅಪ್ನಾಕ್ ಭಾಗ್ ಘೆವ್ಕ್ ಅವ್ಕಾಸ್ ಕರುನ್ ದಿವ್ಚೊ ಮನುನ್ ತೆನಿ ಅಮ್ಚೆಕ್ಡೆ ಲೈ ಮಾಗಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:4
27 ತಿಳಿವುಗಳ ಹೋಲಿಕೆ  

“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.


ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು