Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪೆರ್‍ತಲ್ಯಾಕ್ ಬಿಂಯ್ ಅನಿ ಖಾತಲ್ಯಾಕ್ ಭಾಕ್ರಿ ಗಾವಿ ಸರ್ಕೆ ಕರ್‍ತಾ ತೊ ದೆವ್ ಭರ್ಪುರ್ ಮಾಪಾನ್ ತುಮ್ಚ್ಯಾ ಬಿಯಾಳಾಕ್‍ಬಿ ಚೆಡ್ವುತಾ ಅನಿ ತುಮ್ಚ್ಯಾ ದಾನಾಚೊ ಪಳ್ ಜಾಸ್ತಿ ವಾಡ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:10
16 ತಿಳಿವುಗಳ ಹೋಲಿಕೆ  

ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,


ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ನಿಮ್ಮಲ್ಲಿ ನಮ್ಮ ಪ್ರೀತಿಯು ಹೆಚ್ಚಾದ ಹಾಗೆಯೇ ನಿಮ್ಮ ಪ್ರೀತಿಯು ಒಬ್ಬರಿಂದೊಬ್ಬರಿಗೆ ಹರಡಿ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ಆಶೀರ್ವದಿಸಲಿ.


“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.


ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು