Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹರಿ ಎಕ್ಲೊ ಅಪ್ನಿ ಮನಾತ್ ನಿರ್ನಯ್ ಕರಲ್ಲ್ಯಾ ಪರ್‍ಕಾರ್ ದಿಂವ್ದಿತ್, ಪುರಾ ಸರ್ಕೆ ಕರುನ್ ನ್ಹಯ್ ಕಶ್ಯಾಕ್ ಮಟ್ಲ್ಯಾರ್ ಹಾಸ್ಮುರ್ಕ್ಯಾ ತೊಂಡಾನ್ ದಿತಲೊ ದೆವಾಕ್ ಪ್ರೆಮಾಚೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:7
17 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.


ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.


ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.


ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ನೀವು ನಿಮ್ಮ ನಿಮ್ಮೊಳಗೆ ಯೆಹೋವನಿಗಾಗಿ ಕಾಣಿಕೆಯನ್ನು ತೆಗೆದುಕೊಡಬೇಕು; ಒಳ್ಳೆಯ ಮನಸ್ಸಿರುವವರೆಲ್ಲರೂ ಕಾಣಿಕೆಯನ್ನು ತಂದುಕೊಡಬೇಕು. ಯೆಹೋವನಿಗೆ ತರಬೇಕಾದ ಆ ಕಾಣಿಕೆಯು ಎಂಥದಾಗಿರಬೇಕೆಂದರೆ; ಚಿನ್ನ, ಬೆಳ್ಳಿ, ತಾಮ್ರ ಎಂಬ ಲೋಹಗಳು,


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು.


ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.


ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.


ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು