Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ಅತ್ತಾ ಅಮ್ಕಾ ಸುಟ್ಕಾ ದಿನಾರೊ ಜೆಜು ಕ್ರಿಸ್ತ್ ಯೆಲ್ಲ್ಯಾಚ್ಯಾ ವೈನಾ ತೆಚಿ ಕುರ್ಪಾ ಮಾಳಾಕ್ ಯೆಲಾ. ತೆನಿ ಮರ್ನಾಚ್ಯಾ ಬಳಾಚೊ ನಾಸ್ ಕರ್‍ಲ್ಯಾನ್ ಅನಿ ಬರ್‍ಯಾ ಖಬ್ರೆ ವೈನಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ತೆನಿ ಅಮ್ಕಾ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:10
58 ತಿಳಿವುಗಳ ಹೋಲಿಕೆ  

ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು,


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.


ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.


ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.


ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.


ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.


ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.


“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.


ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.


ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.


ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,


ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು