Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಿಮೊತಿಕ್ ಮಾಜ್ಯಾ ಪ್ರಿತಿಚ್ಯಾ ಲೆಕಾಕ್ ಲಿವ್ತಲೆ. ದೆವ್ ಬಾಪ್ ಅನಿ ಅಮ್ಚೊ ಧನಿ ಕ್ರಿಸ್ತ್ ಜೆಜು ತುಕಾ ಕುರ್ಪಾ ದಯಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:2
10 ತಿಳಿವುಗಳ ಹೋಲಿಕೆ  

ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು