Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನ್ನ ಕಣ್ಣೀರುಗಳನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಿಯಾ ತನ್ನಾ ಜಾತಾನಾ ಡೊಳ್ಯಾನಿ ಕಾಡಲ್ಲ್ಯಾ ದುಕ್ಕಾಂಚಿ ಮಾಕಾ ಯಾದ್ ಹಾಯ್ ಅನಿ ಹೊತಾ ತವ್ಡೆ ಲಗ್ಗು ತುಕಾ ಬಗುಚೆ ಮನ್ತಲಿ ಮಾಜಿ ಆಶಾ. ತನ್ನಾಚ್ ಮಾಜ್ಯಾ ಜಿವಾಕ್ ಸಮಾದಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:4
19 ತಿಳಿವುಗಳ ಹೋಲಿಕೆ  

ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,


ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.


ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.


ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು.


ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಯೆಹೂದ್ಯರ ಒಳಸಂಚುಗಳಿಂದ ಸಂಭವಿಸಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ, ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೇನೆ.


ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.


ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು