Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಮ್ಕಾ ಭಿಂವ್ಕುರೊ ಆತ್ಮೊ ದಿವ್ಕ್ ನಾ; ತೆಚ್ಯಾ ಬದ್ಲಾಕ್, ತೆಚೊ ಆತ್ಮೊ ಆಮ್ಕಾ ತಾಕ್ತಿನ್, ಪ್ರೆಮಾನ್ ಅನಿ ಅಮ್ಕಾಚ್ ಅಮಿ ಸಂಬಾಳ್ತಲ್ಯಾ ತಾಕ್ತಿನ್ ಭರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:7
28 ತಿಳಿವುಗಳ ಹೋಲಿಕೆ  

ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,


ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ, ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ. ಕಾಫ್.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.


ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.


ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.


ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.


ಅದಕ್ಕೆ ಪೌಲನು; “ಮಹಾ ಶ್ರೇಷ್ಠನಾದ ಫೆಸ್ತನೇ, ನಾನು ಹುಚ್ಚನಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನೇ ಹೇಳುತ್ತಿದ್ದೇನೆ.


ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು