Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆಚ್ಯಾಸಾಟ್ನಿ ದೆವಾಚ್ಯಾ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾಸಾಟ್ನಿ ಮಿಯಾ ಹೆ ಸಗ್ಳೆ ಸೊಸ್ತಾ. ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾತ್‍ ತೆಂಕಾ ಸುಟ್ಕಾ ಗಾವುಸಾಟಿ ಅನಿ ತೆಚ್ಯಾ ವಾಂಗ್ಡಾ ಕನ್ನಾಚ್ ಸರುನಸಲ್ಲಿ ಮಹಿಮಾ ಕಮ್ವುನ್ ಘೆವ್‍ಸಾಟ್ನಿ ಮಿಯಾ ಹೆ ಸಗ್ಳೆ ಸೊಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:10
29 ತಿಳಿವುಗಳ ಹೋಲಿಕೆ  

ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.


ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.


ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.


ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ನಾನೂ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲರಂತಾದೆನು.


ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?


ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು,


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


ಆದರೆ ಅವನು, “ನಾನು ಅವನನ್ನು ಅರಿಯೆನಮ್ಮಾ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು