Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾಸಾಟ್ನಿ ಜೊ ಕೊನ್‍ ಅಪ್ನಾಚಿ ಬುರ್ಶಿ ಕಾಮಾ ಸೊಡುನ್ ಅಪ್ನಾಕುಚ್ ಪವಿತ್ರ್ ಕರ್‍ತಾ, ತೊ ಬರ್‍ಯಾ ವಿಶೆಸ್ ಕಾಮಾತ್ನಿ ಉಪಯೊಗಾಕ್ ಪಡ್ತಲೆ ಆಯ್ದಾನ್ ಹೊತಾ. ಕಶ್ಯಾಕ್ ಮಟ್ಲ್ಯಾರ್, ತೊ ಧನಿಯಾಕ್ ಒಪ್ಸುನ್ ದಿಲ್ಲೊ ಹೊತಾ. ಹರಿಎಕ್ ಮೊಟ್ಯಾ ಮೊಟ್ಯಾ ಬರ್‍ಯಾ ಕಾಮಾಕ್ನಿ ಉಪಯೊಗಾಕ್ನಿ ಪಡ್ತಲೆ ಆಯ್ದಾನ್ ತೊ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:21
21 ತಿಳಿವುಗಳ ಹೋಲಿಕೆ  

ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.


ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.


ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,


ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.


ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು