Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಿಯಾ ತುಜ್ಯಾ ವಿರೊದ್ಯಾಕ್ನಿ ಬುದ್‍ಬಾಳ್ ಸಾಂಗ್ತಾನಾ ಥಂಡ್‍ಪಾನಾನ್ ಅನಿ ಸಂಬಾಳುನ್ ಘೆವ್ನ್ ವ್ಹಾಕ್ಡೆ ಗೆಲ್ಲ್ಯಾಕ್ನಿ ಬರ್‍ಯಾ ವಾಟೆಕ್ ಹಾನ್ತಲೊ ಹೊವ್ಚೆ. ಹೆಚ್ಯಾ ವೈನಾ ದೆವಾನ್ ತೆಂಕಾ ತೆಂಚಿ ಪಾಪಾ ವಳ್ಕುನ್ ಘೆವ್ನ್ ಮನಾ ಬದ್ಲುನ್ ಬರ್‍ಯಾ ವಾಟೆಕ್ ಯೆಯ್ ಸರ್ಕೆ ಕರ್ಲ್ಯಾರ್ಬಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:25
30 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.


ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.


“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.


“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು