Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಿಯಾ ಬಾರಿಕ್ ಹೊತ್ತ್ಯಾ ತನ್ನಾಚ್ಯಾನುಚ್ ತುಕಾ ಪವಿತ್ರ್ ಪುಸ್ತಕಾಚೆ ಜ್ಞಾನ್ ಶಿಕ್ವುನ್ ಹೊಲ್ಲೆ ಹಾಯ್, ತೆ ಜ್ಞಾನ್ ದಿತಾ ಅನಿ ತುಕಾ ಜೆಜು ಕ್ರಿಸ್ತಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗಾವ್ತಲ್ಯಾ ಸುಟ್ಕೆಚ್ಯಾ ವಾಟೆನ್ ಚಾಲ್ವುನ್ ನ್ಹೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:15
38 ತಿಳಿವುಗಳ ಹೋಲಿಕೆ  

ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;


ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.


ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”


ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.


ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.


ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.


ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.


ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು