Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವಭಯವಿಲ್ಲದವರೂ ಮಮತೆಯಿಲ್ಲದವರೂ ಸಮಾಧಾನವಾಗದವರೂ ಚಾಡಿಹೇಳುವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೇದನ್ನು ಪ್ರೀತಿಸದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇತರರನ್ನು ಪ್ರೀತಿಸದವರಾಗಿರುತ್ತಾರೆ; ಕ್ಷಮಿಸದವರಾಗಿರುತ್ತಾರೆ; ದೂಷಿಸುವವರಾಗಿರುತ್ತಾರೆ. ತಮ್ಮ ಮೇಲೆ ತಮಗೇ ಹತೋಟಿಯಿಲ್ಲದವರಾಗಿರುತ್ತಾರೆ; ಉತ್ತಮವಾದದ್ದನ್ನು ದ್ವೇಷಿಸುವವರಾಗಿರುತ್ತಾರೆ; ಕೋಪಿಷ್ಠರಾಗಿರುತ್ತಾರೆ; ಸಂಕುಚಿತ ಗುಣವುಳ್ಳವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದಯಾಮಾಯಾ ನಸಲ್ಲಿ, ಸಮಾದಾನ್ ನಸಲ್ಲಿ, ಚಾಡಿಯಾಳಿ, ಕಟೊರ್, ರಾಗಿಸ್ಟ್ , ಬರೆ ಹೊತ್ತೆ ಧುರ್ ಕರ್‍ತಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:3
31 ತಿಳಿವುಗಳ ಹೋಲಿಕೆ  

“ಭಕ್ತಿಗೆ ವಿರುದ್ಧವಾದ ತಮ್ಮ ಆಸೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರೆಂದು” ಅವರು ನಿಮಗೆ ಹೇಳಿದರು.


ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.


ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು, ಚಾಡಿಹೇಳುವವರಾಗಿರದೆ, ಸ್ವಸ್ಥಬುದ್ಧಿಯುಳ್ಳವರೂ, ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.


ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ.


ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಹಾಗೆಯೇ, ವೃದ್ಧ ಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಅಧೀನರು ಆಗಿರದೆ ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು.


ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.


ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು.


ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ.


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು