Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕೊನ್‍ಬಿ ಖಲ್ಯಾ ವಾಟೆನ್‍ಬಿ ತುಮ್ಕಾ ಪಸ್ವುಚೆ ನ್ಹಯ್, ತಸೆ ತುಮಿ ಉಶಾರ್ಕಿನ್ ರ್‍ಹಾವಾ, ಕಶ್ಯಾಕ್ ಮಟ್ಲ್ಯಾರ್ ನರ್ಕಾಕ್ ಸಮಂದ್ ಪಡಲ್ಲೊ ದುಸ್ಟ್ ಅನಿ ಬುರ್ಸೊ ವಿರೊದಿ ದಿಸ್ಲ್ಯಾ ಸಿವಾಯ್ ತೊ ನಾಸಾಚೊ ದಿಸ್ ಯೆಯ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:3
17 ತಿಳಿವುಗಳ ಹೋಲಿಕೆ  

ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.


ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು.


ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,


“ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.


ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು