Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ; ಆದರೆ ಇದುವರೆಗೆ ಅಡ್ಡಿಮಾಡುವವನು ತೆಗೆದುಬಿಡಲ್ಪಡುವ ತನಕ ಅದು ಗುಪ್ತವಾಗಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಘುಟಾನಿ ಹೊತ್ತೊ ಹ್ಯೊ ವಿರೊದಿ ಅಪ್ನಾಚೆ ಕಾಮ್ ಕರುನ್ಗೆತುಚ್ ಹಾಯ್. ಖರೆ ತ್ಯಾ ಘುಟಾನ್ ಹೊತ್ತ್ಯಾ ವಿರೊದಿಕ್ ಅಡ್ವುನ್ ಧರಲ್ಲೊ ಎಕ್ಲೊ ಹಾಯ್, ತೆನಿ ಅವ್ಕಾಸ್ ದಿ ನಸ್ತಾನಾ ತೊ ವಿರೊದಿ ಕಾಮ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:7
9 ತಿಳಿವುಗಳ ಹೋಲಿಕೆ  

ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.


ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ.


ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.


ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು