Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ; ಎಲ್ಲರಲ್ಲಿ ಕ್ರಿಸ್ತ ನಂಬಿಕೆಯಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಬುರ್ಸ್ಯಾಪಾನಾತ್ನಾ ಅನಿ ವಾಯ್ಟ್ ಮಾನ್ಸಾನಿತ್ನಾ ಅಮ್ಕಾ ಬಚಾವ್ ಕರ್ ಮನುನ್ ಅಮ್ಚ್ಯಾಸಾಟ್ನಿ ಮಾಗ್ನಿ ಕರಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳಿ ಲೊಕಾ ಬರಿ ಖಬರ್ ಮಾನುನ್ ಘೆಯ್‍ನಾತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:2
18 ತಿಳಿವುಗಳ ಹೋಲಿಕೆ  

ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.


ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.


ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.


ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.


ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.


ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.


ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು